Breaking News

ಲಂಚ ವಸೂಲಿ, ಸಿಪಿಐ ಉದಯರವಿ ಅಮಾನತು

ಬಳ್ಳಾರಿ: ಕಬ್ಬಿಣದ ಅದಿರು ಅಕ್ರಮ ದಾಸ್ತಾನಿಗೆ ನೆರವಾಗಿದ್ದು, ಕೆರೆಯ ಮಣ್ಣು ಸಾಗಿಸುತ್ತಿದ್ದ ದಂಧೆಕೋರರಿಂದ ಲಂಚ ವಸೂಲಿ ಮಾಡಿದ ಆರೋಪದಡಿ ಬಳ್ಳಾರಿ ಗ್ರಾಮೀಣ ವೃತ್ತ ಸಿಪಿಐ ಉದಯ ರವಿ ಅವರನ್ನು ಅಮಾನತು ಮಾಡಲಾಗಿದೆ. ತಾಲೂಕಿನ ಹಲಕುಂದಿ ಗ್ರಾಮದ ಬಳಿ ಅಕ್ರಮ ಅದಿರು ದಾಸ್ತಾನು ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರದೆ ಮುಚ್ಚಿಹಾಕಲು ಉದಯರವಿ ಯತ್ನಿಸಿದ್ದರು. ಕೊಳಗಲ್ ಗ್ರಾಮದ ಕೆರೆಯ ಮಣ್ಣನ್ನು ಇಟ್ಟಂಗಿ ಭಟ್ಟಿಗಳಿಗೆ ಅಕ್ರಮವಾಗಿ ಸಾಗಿಸಲು ಟ್ರಾೃಕ್ಟರ್ ಮಾಲೀಕರಿಂದ ಹಣ ಪಡೆದ ಆರೋಪಗಳಿದ್ದವು. ಐಜಿಪಿ ಜೂ.6ರಂದು ಹೊರಡಿಸಿದ್ದ ಅಮಾನತು ಆದೇಶವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಜೂ.7ರಂದು ಅಂಗೀಕರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *