Breaking News

ಬ್ರೇಕ್‌ ಬದಲು ಎಕ್ಸಿಲೇಟರ್‌ ಒತ್ತಿದ ಬೆಂಗಳೂರು ಮಹಿಳೆ:ಕಾರು ಹರಿದು ವ್ಯಕ್ತಿ ದುರ್ಮರಣ

ರಾಣೆಬೆನ್ನೂರು: ಮಹಿಳೆಯೊಬ್ಬರು ಕಾರು ನಿಲ್ಲಿಸುವಾಗ ಬ್ರೇಕ್‌ ಬದಲು ಎಕ್ಸಿಲೇಟರ್‌ ಒತ್ತಿದ ಪರಿಣಾಮ ಎದುರಿಗಿದ್ದ ವ್ಯಕ್ತಿ ಮೇಲೆ ಕಾರು ಹರಿದು ಮೃತಪಟ್ಟ ಘಟನೆ ತಾಲೂಕಿನ ಚೌಡಯ್ಯ ದಾನಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಅಜ್ಜಪ್ಪ ಶಿವಪ್ಪ ಕಳಸಣ್ಣನವರ (40) ಮೃತ ದುರ್ದೈವಿ. ಬೆಂಗಳೂರಿನ ಸುಜಾತಾ ಕೆ.ಎಂ.ಕಾರು ಹಾಯಿಸಿದ ಮಹಿಳೆ. ಅಜ್ಜಪ್ಪ ವಿದ್ಯುತ್‌ ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ. ಸುಜಾತಾಳ ಜಮೀನಿನಲ್ಲಿ ವಿದ್ಯುತ್‌ ಪರಿವರ್ತಕದ ಕೆಲಸವಿದ್ದ ಕಾರಣ ಅವರ ಜಮೀನಿನ ಬಳಿ ಕೆಲಸ ಮಾಡುತ್ತಿದ್ದರು. ಈ ಸಮಯ ದಲ್ಲಿ ಕಾರಿನಲ್ಲಿ ಬಂದ ಸುಜಾತಾ ಅಜ್ಜಪ್ಪನನ್ನು ಮಾತನಾಡಿಸುವ ಸಲುವಾಗಿ ಕಾರು ನಿಲ್ಲಿಸಲು ಮುಂದಾದಾಗ ಬ್ರೇಕ್‌ ಬದಲು ಎಕ್ಸಿಲೇಟರ್‌ ಒತ್ತಿದ್ದಾಳೆ. ಇದರಿಂದ ಕಾರು ಎದುರಿಗೆ ನಿಂತಿದ್ದ ಅಜ್ಜಪ್ಪನ ಮೈ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಆತನನ್ನು ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ತೆರಳುವಾಗ ಮಾರ್ಗಮಧ್ಯೆ ಆತ ಮೃತಪಟ್ಟಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *