ಕುಂಬಳೆ: ಪಯ್ಯನ್ನೂರು ಎಡಾಟ್ನಲ್ಲಿ ಮಹಾರಾಷ್ಟ್ರ ನಿವಾಸಿ ಸ್ವರ್ಣೕೊದ್ಯಮಿಯ ಕಾರನ್ನು ಅಡ್ಡಗಟ್ಟಿ 55 ಲಕ್ಷ ರೂ. ನಗದು ಸಹಿತ ಚಿನ್ನಾಭರಣ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ಅಂಜಾಪೀಡಿಗ ನಿವಾಸಿ ಸನು ಯಾನೆ ಸಂತೋಷ್ನನ್ನು ಉಪ್ಪಳದಿಂದ ಪೊಲೀಸರು ಬಂಧಿಸಿದ್ದಾರೆ. ಆಕ್ರಮಣಕ್ಕೆ ಬಳಸಿದ ಕಾರನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಈ ತಂಡ ಬಾಡಿಗೆಗೆ ಪಡೆದಿದ್ದ ಇನ್ನೊಂದು ಕಾರನ್ನು ಕಣ್ಣೂರಿನ ಚೋಕ್ಲಿಯಲ್ಲಿ ಪತ್ತೆಹಚ್ಚಲಾಗಿದೆ. ಪಯ್ಯನ್ನೂರು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

