ಬೆಂಗಳೂರು ವೈಟ್ಫೀಲ್ಡ್ನಲ್ಲಿ ಪೂಜೆಯ ನೆಪದಲ್ಲಿ ಸುಮಾರು ₹7 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪದಡಿ ನವೀದಾ ಸುಲ್ತಾನ ಮತ್ತು ಪರ್ವೇಜ್ ವಿರುದ್ಧ ಪ್ರಕರಣ ದಾಖಲಾಗಿದೆ. ದೂರುದಾರ ಮೋಯಿನ್ ಪಾಷಾ ಅವರ ಸಹೋದರನಿಗೆ ಗಂಡಾಂತರವಿದೆ ಎಂದು ನಂಬಿಸಿ, ಪೂಜೆಯ ವೇಳೆ 35 ಗ್ರಾಂ ಚಿನ್ನಾಭರಣವನ್ನು ಪೆಟ್ಟಿಗೆಯಲ್ಲಿ ಇಡಲು ಆರೋಪಿಗಳು ಸೂಚಿಸಿದ್ದರು. ಬಳಿಕ ಪೆಟ್ಟಿಗೆಯನ್ನು ಪರಿಶೀಲಿಸಿದಾಗ ಚಿನ್ನಾಭರಣ ನಾಪತ್ತೆಯಾಗಿರುವುದು ಗೊತ್ತಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

