Breaking News

ಕಾಂಗ್ರೆಸ್ ನಿಂದ ಸರ್ಕಾರಿ ಹುದ್ದೆ ಸೇಲು, ಕಾಸು ಕೊಟ್ರೆ ಡೀಲು – ವಿದ್ಯಾರ್ಥಿಗಳಿಗೆ ಆಮಿಷ ಒಡ್ಡಿದ್ದ ವಂಚಕ!

ಹುಬ್ಬಳ್ಳಿಯಲ್ಲಿ ಕೆಪಿಟಿಸಿಎಲ್ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಆಮಿಷ ಒಡ್ಡಿ ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಲು ಯತ್ನಿಸಿದ್ದ ಆರೋಪಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಮೂಲದ ವೆಂಕಟೇಶ ರಾಠೋಡ ಬಂಧಿತ ಆರೋಪಿ. ‘ಇಟ್ಸ್ ಮೀ ಅಮರ್ ಅಪ್ಡೇಟ್ಸ್’ ಎಂಬ ಯೂಟ್ಯೂಬ್ ಚಾನೆಲ್ ಮೂಲಕ ಲೈನ್‌ಮನ್ ಹುದ್ದೆಗಳನ್ನು ಕೊಡಿಸುವುದಾಗಿ ಹೇಳಿ, ಅಭ್ಯರ್ಥಿಗಳು ತಕ್ಷಣ ಹಣ ಸಿದ್ಧಪಡಿಸಿಕೊಳ್ಳುವಂತೆ ವಿಡಿಯೋದಲ್ಲಿ ಕರೆ ನೀಡಿದ್ದ. ಕೆಲಸ ಆಗದಿದ್ದರೆ ಹಣ ವಾಪಸ್ ನೀಡುವುದಾಗಿ ಭರವಸೆ ನೀಡಿ ಜನರನ್ನು ನಂಬಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ವೈರಲ್ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ ವಿದ್ಯಾನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈತನ ಹಿಂದೆ ಇನ್ನೂ ಯಾರಾದರೂ ಕೈವಾಡವಿದೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *