ದಾವಣಗೆರೆ ತಾಲೂಕಿನ ಹೆಚ್. ಕಲ್ಪನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಗೋದಾಮೊಂದರಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿ, 18ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ಗಳು ಸರಣಿ ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಸಿಲಿಂಡರ್ಗಳು ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವಘಡದಲ್ಲಿ ಅನಿಲ್ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋದಾಮು ಜನವಸತಿ ಪ್ರದೇಶದಿಂದ ದೂರದ ಅಡಿಕೆ ತೋಟದಲ್ಲಿದ್ದ ಕಾರಣ ದೊಡ್ಡ ಪ್ರಮಾಣದ ಪ್ರಾಣಹಾನಿ ತಪ್ಪಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಫೋಟಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

