ಬೆಳಗಾವಿ ಜಿಲ್ಲೆಯಲ್ಲಿ ₹2 ಕೋಟಿ ವಿಮೆ ಹಣ ಪಡೆಯುವ ಉದ್ದೇಶದಿಂದ ಪತಿಯನ್ನು ಕೊಲೆ ಮಾಡಿರುವ ಭೀಕರ ಪ್ರಕರಣ ಬೆಳಕಿಗೆ ಬಂದಿದೆ. ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಸಂದೀಪ್ ಮಂಜರಗಿ (35) ಅವರನ್ನು ಪತ್ನಿ ಸುಮಾ ಹಾಗೂ ಆಕೆಯ ಪ್ರಿಯಕರ ಪುಂಡಲೀಕ ಡೊಂಗರ್ ಸೇರಿ ಆಸ್ಪತ್ರೆಯಲ್ಲೇ ವಿಷ ನೀಡಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ರಸ್ತೆ ಅಪಘಾತದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ಸಂದೀಪ್ಗೆ ಸಲೈನ್ ಮೂಲಕ ವಿಷ ನೀಡಲಾಗಿದ್ದು, ಸಾವನ್ನು ಹೃದಯಾಘಾತ ಎಂದು ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ತಿಗಣೆ ಔಷಧ ಹಾಗೂ ಇಲಿ ಪಾಷಾಣ ಮಿಶ್ರಿತ ವಿಷ ಬಳಕೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದ ತನಿಖೆಯಲ್ಲಿ ಎಫ್ಎಸ್ಎಲ್ ವರದಿ ತಿರುಚಿ ಸಾಕ್ಷ್ಯ ಮುಚ್ಚಿಹಾಕಲು ಯತ್ನಿಸಿರುವುದು ಬಹಿರಂಗವಾಗಿದೆ. ಪತ್ನಿ, ಪ್ರಿಯಕರ ಹಾಗೂ ಎಫ್ಎಸ್ಎಲ್ ಸಿಬ್ಬಂದಿ ಸೇರಿ ಸುಮಾರು 80 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

