Breaking News

ಕಬ್ಬು ಕಟಾವು ಮಾಡುವ ನೆಪದಲ್ಲಿ 3.71 ಕೋಟಿ ರೂ. ವಂಚನೆ

ಹಾವೇರಿ: ಕಬ್ಬು ಕಟಾವು ಮಾಡಲು ಬರುವುದಾಗಿ ನಂಬಿಸಿ 3.71 ಕೋಟಿ ರೂ. ಪಡೆದುಕೊಂಡು ಕೆಲಸಕ್ಕೆ ಬಾರದೆ ವಂಚನೆ ಮಾಡಿದ 27 ಜನರ ವಿರುದ್ಧ ಇಲ್ಲಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕಂದಾರ ತಾಲೂಕಿನ ದಿಗ್ರಾಸ್ ಗ್ರಾಮದ ಉಲ್ಲಾಸ ಧನುಜಿ ರಾಥೋಡ್ ಸೇರಿ 27 ಜನರ ವಿರುದ್ಧ ಪ್ರಕರಣ ದಾಖಲಾಗಿರುವುದು. ತಾಲೂಕಿನ ಸಂಗೂರಿನ ಜಿ.ಎಂ. ಶುಗರ್ಸ್ ಕಂಪನಿಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಮಾಣೀಕರಾವ ಗಡದೆ ಎಂಬುವರು ಇವರ ವಿರುದ್ದ ದೂರು ನೀಡಿದ್ದಾರೆ. ಆರೋಪಿತರು ಕಬ್ಬು ಕಟಾವು ಮತ್ತು ಸಾಗಾಟ ಮಾಡುವುದಾಗಿ ನಂಬಿಸಿ ಕಂಪನಿಯಿಂದ 3.71 ಕೋಟಿ ರೂ. ಹಣ ಪಡೆದುಕೊಂಡಿದ್ದಾರೆ. ನಂತರ ಕೆಲಸಕ್ಕೆ ಬಾರದೆ ಹಾಗೂ ಹಣ ವಾಪಸ್ ನೀಡದೆ ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *