Breaking News

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗೆ ಅಶ್ಲೀಲ ನಿಂದನೆ: ದೂರು ದಾಖಲು

ಶಿವಮೊಗ್ಗ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಏಕವಚನದಲ್ಲಿ ನಿಂದಿಸಿದ ಆರೋಪದ ಮೇಲೆ ಎಂ.ಎನ್. ಗಣೇಶ್ ಎಂಬ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆರ್.ಎಸ್.ಎಸ್. ಕುರಿತಾಗಿ ಸಾರ್ವಜನಿಕವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೀಡಿದ ಹೇಳಿಕೆಯ ಸಂದರ್ಭದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿತ್ತು. ಈ ಕುರಿತಾಗಿ ಎಂ.ಎಸ್. ಗಣೇಶ್ ಎಂಬ ವ್ಯಕ್ತಿ ಅಶ್ಲೀಲವಾಗಿ ಕಿಮ್ಮನೆ ರತ್ನಾಕರ್ ಅವರನ್ನು ಏಕವಚನದಲ್ಲಿ ನಿಂದಿಸಿದ್ದು, ಸೂಕ್ತ ಕ್ರಮ ಕೈಗೊಂಡು ಬಂಧಿಸಬೇಕು ಎಂದು ಒತ್ತಾಯಿಸಿ ತಾಲೂಕು ಕಾಂಗ್ರೆಸ್ ಇಂಟೆಕ್ ಘಟಕದ ಅಧ್ಯಕ್ಷ ಪ್ರೇಮಚಂದ್ರ ಯಡೂರು ನೇತೃತ್ವದಲ್ಲಿ ದೂರು ನೀಡಲಾಗಿದೆ. ಈ ಸಂದರ್ಭದಲ್ಲಿ ತೀರ್ಥಹಳ್ಳಿ ತಾಲೂಕು ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಹೊಸ್ಕೇರಿ ರವಿಕುಮಾರ್, ನಗರ ಘಟಕದ ಅಧ್ಯಕ್ಷ ಶ್ರೇಯಸ್ ರಾವ್, ಜಯಕರ ಶೆಟ್ಟಿ, ಫಣಿರಾಜ್ ಕಟ್ಟೆಹಾಕ್ಕಲು, ಪ್ರಶಾಂತ್ ಸಾಲ್ಯಾನ್, ಸಂದೀಪ್, ಮಹೇಂದ್, ಇತರರು ಇದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *