ಬೆಂಗಳೂರು: ಮಡಿವಾಳದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಕೇರಳ ಮೂಲದ ಉದ್ಯಮಿಗಳನ್ನು ಬೆದರಿಸಿ ₹20 ಲಕ್ಷ ದರೋಡೆ ಮಾಡಿದ ಪ್ರಕರಣದಲ್ಲಿ ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಹೆಸರು ಕೇಳಿಬಂದಿದೆ. ಇನ್ಸ್ಪೆಕ್ಟರ್ ಸೇರಿದಂತೆ ಕೆಲವರು ಪೊಲೀಸರ ಸೋಗಿನಲ್ಲಿ ಹೋಟೆಲ್ ಕೊಠಡಿಗೆ ನುಗ್ಗಿ, ಉದ್ಯಮಿಗಳಿಂದ ಹಣ ಕಸಿದುಕೊಂಡು ಪೊಲೀಸ್ ಜೀಪಿನಲ್ಲಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಮೇರೆಗೆ ತನಿಖೆ ನಡೆಸಿದ ಮಡಿವಾಳ ಪೊಲೀಸರು ಕುಪೇಂದ್ರ ಎಂಬಾತನನ್ನು ಬಂಧಿಸಿದ್ದು, ವಿಚಾರಣೆ ವೇಳೆ ಪ್ರಕರಣದ ಪ್ರಮುಖ ಮಾಹಿತಿ ಬಹಿರಂಗವಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಶೋಧ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

