ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ರಿಹ್ಯಾಬ್ ಸೆಂಟರ್ ಮಾಲೀಕನನ್ನು ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಶಿವಲಿಂಗಯ್ಯ (60) ಕೊಲೆಯಾದ ದುರ್ದೈವಿ. ರಿಹ್ಯಾಬ್ ಸೆಂಟರ್ ಗೆ ಚಿಕಿತ್ಸೆಗೆಂದು ಬಂದವರಿಂದಲೇ ಮಾಲೀಕನ ಹತ್ಯೆಯಾಗಿದೆ.ರಾಡ್ ನಿಂದ ಹೊಡೆದು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಚಂದ್ರಾ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

