Breaking News

ಇನ್ಸ್‌ಪೆಕ್ಟರ್ ಮಹೇಶ್‌ನ ಮತ್ತೊಂದು ವಂಚನೆ ಪತ್ತೆ: ಸರ್ಕಾರಕ್ಕೂ ಸುಳ್ಳು ಮಾಹಿತಿ ರವಾನಿಸಿದ್ದ ಖತರ್ನಾಕ್

ಬೆಂಗಳೂರು ದರೋಡೆ ಪ್ರಕರಣದಲ್ಲಿ ಬಂಧಿತ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ವಿರುದ್ಧ ಭೂ ಹಗರಣದ ಆರೋಪವೂ ಕೇಳಿಬಂದಿದೆ. ಐಒಸಿಗೆ ಸೇರಿದ 1.53 ಕೋಟಿ ರೂ. ಮೌಲ್ಯದ ಜಾಗ ಒತ್ತುವರಿಗೆ ನೆರವಾಗಿದ್ದಾನೆ ಎನ್ನಲಾಗಿದೆ. ಪೆಟ್ರೋಲ್ ಬಂಕ್ ನಿರ್ಮಾಣಕ್ಕಾಗಿ ಹಾಕಿದ್ದ ವ್ಯವಸ್ಥೆಯನ್ನು ಧ್ವಂಸಗೊಳಿಸಿ ಬೆದರಿಕೆ ಹಾಕಿದ ಆರೋಪವೂ ಆತನ ಮೇಲಿದೆ. ಈ ಸಂಬಂಧ ಮಾಜಿ ಕಾರ್ಪೊರೇಟರ್ ಸೇರಿದಂತೆ ಇತರರೊಂದಿಗೆ ಕೈಜೋಡಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಇದೇ ವೇಳೆ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ ಎಂದು ಸುಳ್ಳು ಮಾಹಿತಿ ನೀಡಿ ಸರ್ಕಾರವನ್ನು ದಾರಿ ತಪ್ಪಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *