ಮುಳ್ಳೇರಿಯ: ಸಹೋದರಿಯ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸರಿಂದ ಬಂಧಿತನಾಗಿ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡ ಸಹೋದರ ಮನೆಯಲ್ಲಿ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಆದೂರು ಠಾಣಾ ವ್ಯಾಪ್ತಿಯ ಅಡೂರು ಚಾಮೆಕೊಚ್ಚಿಯ ಶ್ರೀಕೃಷ್ಣ ನಿಲಯದ ರಘುರಾಮ ರಾವ್ ಅವರ ಪುತ್ರ ಕೃಷ್ಣ ಪ್ರಸಾದ್ (34) ಸಾವಿಗೀಡಾದ ವ್ಯಕ್ತಿ.ಶನಿವಾರ ಸಂಜೆ ಮನೆಯೊಳಗೆ ನೆಲದಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮನೆಯಿಂದ ದುರ್ಗಂಧ ಹರಡಲಾರಂಭಿಸಿದ ಹಿನ್ನೆಲೆಯಲ್ಲಿ ಪರಿಸರ ನಿವಾಸಿಗಳು ಬಂದು ನೋಡಿದಾಗ ಮೃತದೇಹ ಪತ್ತೆಯಾಯಿತು. ಬಳಿಕ ವಾರ್ಡ್ ಸದಸ್ಯೆ ಆದೂರು ಪೊಲೀಸರಿಗೆ ತಿಳಿಸಿದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮನೆಯಲ್ಲಿ ಇವರೊಬ್ಬರೇ ವಾಸಿಸುತ್ತಿದ್ದರು. ಮನೆಯವರೆಲ್ಲರೂ ಬೆಂಗಳೂರಿನ ಸಹೋದರಿಯ ಮನೆಯಲ್ಲಿ ವಾಸವಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸೂಚಿಸಿದೆ. ಆದೂರು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

