Breaking News

ಹಣವಂತರಿಗೆ ಗಾಳ ಹಾಕ್ತಿದ್ದ ಕಿರುತೆರೆ ನಟಿ ಅರೆಸ್ಟ್; ಆಭರಣ ಬಿಡಿಸೋ ನೆಪದಲ್ಲಿ ಲಕ್ಷ ಲಕ್ಷ ವಂಚಿಸುತ್ತಿದ್ದ ‘ಕಿಲಾಡಿ’ ವನಿತಾ

ಬೆಂಗಳೂರು: ಕಿರುತೆರೆ ನಟಿ ಎಂದು ಪರಿಚಯಿಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ಹಣವಂತರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ನಟಿ ವನಿತಾಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆ ಸ್ನೇಹ ಬೆಳೆಸಿ, ಚಿನ್ನದ ಆಭರಣಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ನಂಬಿಸಿ ಸಾಲ ಪಡೆದು ಬಳಿಕ ಸಂಪರ್ಕ ಕಡಿತಗೊಳಿಸುತ್ತಿದ್ದಳು ಎನ್ನಲಾಗಿದೆ. ಯುವಕನೊಬ್ಬರಿಂದ 1 ಲಕ್ಷ ರೂ. ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈಕೆಯ ವಿರುದ್ಧ ನಗರದ ಇತರೆ ಠಾಣೆಗಳಲ್ಲಿಯೂ ದೂರುಗಳು ದಾಖಲಾಗಿವೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *