Breaking News

ದಾವಣಗೆರೆಯಲ್ಲಿ ಶಂಕಿತ ಉಗ್ರ ಬಂಧನ ; ಅಯೋಧ್ಯೆ ರಾಮಮಂದಿರ ಗುರಿಯಾಗಿಸಿದ್ದ ಸಂಚು ಬಹಿರಂಗ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಅಡಗಿದ್ದ ಉತ್ತರ ಪ್ರದೇಶ ಮೂಲದ 20 ವರ್ಷದ ಸುಹೇಲ್ ಎಂಬ ಶಂಕಿತನನ್ನು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಅಯೋಧ್ಯೆಯ ರಾಮ ಮಂದಿರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಉದ್ದೇಶ ಹೊಂದಿದ್ದಾನೆ ಎಂಬ ಮಾಹಿತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಆತನ ಮೊಬೈಲ್‌ನಲ್ಲಿ ಪಾಕಿಸ್ತಾನ ಮೂಲದ ಸಂಪರ್ಕಗಳು, ಆಕ್ಷೇಪಾರ್ಹ ದಾಖಲೆಗಳು ಹಾಗೂ ಶಸ್ತ್ರಾಸ್ತ್ರಗಳ ಫೋಟೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಸದ್ಯ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *