Breaking News

ರಾಜ್ಯವನ್ನೇ ಬೆಚ್ಚಿಬೀಳಿಸಿದ ಕೆಆರ್‌ ಪುರಂ ತ್ರಿಬಲ್ ಮರ್ಡರ್ ಕೇಸ್, ಕೊನೆಗೂ ಪಾಪಿ ಮಗಳು ಅರೆಸ್ಟ್, ಸಿಕ್ಕಿದ್ದೆಲ್ಲಿ ಗೊತ್ತಾ

ಬೆಂಗಳೂರು ಕೆಆರ್ ಪುರಂ ತ್ರಿಬಲ್ ಮರ್ಡರ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ವೇತಾಳನ್ನು ಪೊಲೀಸರು ಪುದುಚೇರಿಯಲ್ಲಿ ಬಂಧಿಸಿದ್ದಾರೆ. ಪ್ರಿಯಕರ ಕೆನತ್ ಜೊತೆ ಸೇರಿ ತಂದೆ, ತಾಯಿ ಹಾಗೂ ತಂಗಿಯನ್ನು ಹತ್ಯೆ ಮಾಡಿದ ಆರೋಪ ಆಕೆಯ ಮೇಲಿದೆ. ತನಿಖೆ ವೇಳೆ ಶ್ವೇತಾ ಬರೆದಿದ್ದ ಡೈರಿ ಪತ್ತೆಯಾಗಿದ್ದು, ಅದರಲ್ಲಿ ತನ್ನ ಮನಸ್ಥಿತಿಗೆ ಸಂಬಂಧಿಸಿದ ಹಲವು ಬರಹಗಳು ಕಂಡುಬಂದಿವೆ. ಪ್ರಕರಣದ ಸಂಬಂಧ ಪೊಲೀಸರು ಮನೆದಿಂದ ಹಲವು ಪ್ರಮುಖ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಶ್ವೇತಾ ಮತ್ತು ಕೆನತ್ ಕಾಲೇಜು ದಿನಗಳಿಂದ ಪ್ರೀತಿಸುತ್ತಿದ್ದು, ಬಳಿಕ ಲಿವ್-ಇನ್ ಸಂಬಂಧದಲ್ಲಿದ್ದರು ಎಂದು ತಿಳಿದುಬಂದಿದೆ. ಶ್ವೇತಾಳನ್ನು ಬಂಧಿಸಿರುವ ಪೊಲೀಸರು, ಪರಾರಿಯಾಗಿರುವ ಕೆನತ್‌ಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *