Breaking News

ಕಾವೇರಿ ನದಿಯಲ್ಲಿ ಮುಳುಗಿದ ಐವರ ಮೃತದೇಹ ಪತ್ತೆ- ಕಣ್ಣೀರಿಟ್ಟು ಘಟನೆಯ ಭೀಕರತೆ ಬಿಚ್ಚಿಟ್ಟ ಪಾರಾದ ವ್ಯಕ್ತಿ

ಮಂಡ್ಯ ಜಿಲ್ಲೆಯ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿಯ ಮೃತದೇಹಗಳು ಪತ್ತೆಯಾಗಿವೆ. ದೇವಸ್ಥಾನಕ್ಕೆ ಭೇಟಿ ನೀಡಿದ್ದ ಕುಟುಂಬದ ಸದಸ್ಯರು ನದಿಯ ತಟದಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ವಿಜಯಮ್ಮ ನೀರಿನಲ್ಲಿ ಮುಳುಗಲು ಆರಂಭಿಸಿದಾಗ ಅವರನ್ನು ರಕ್ಷಿಸಲು ಶ್ವೇತಾ, ಚೈತ್ರಾ ಹಾಗೂ ಪ್ರಿಯಾಂಕಾ ಮುಂದಾಗಿದ್ದರು. ಬಳಿಕ ಅವರನ್ನು ಕಾಪಾಡಲು ನೀರಿಗೆ ಇಳಿದ ಕಾರು ಚಾಲಕ ಮಹೇಶ್ ಕೂಡ ಸುಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ರವಿ ಮಾತ್ರ ಸ್ಥಳೀಯರ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *