ಕುರುಗೋಡು (ಬಳ್ಳಾರಿ): ಮೊಹರಂ ಆಚರಣೆಗಾಗಿ ನಿರ್ಮಿಸಿದ್ದ ಅಲಾಯಿ ಕುಣಿಗೆ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಕ್ಯಾದಿಗೆಹಾಳ್ನಲ್ಲಿ ಸಂಭವಿಸಿದೆ. ಮೊಹರಂ ಆಚರಣೆಗಾಗಿ ಪೀರಲು ದೇವರ ಪ್ರತಿಷ್ಠಾಪಿಸಿ ಅಲಾಯಿ ಕುಣಿ (ಬೆಂಕಿ ಉರಿಸುವ ಹೊಂಡ) ತೋಡಿ ಬೆಂಕಿ ಹಾಕಲಾಗಿತ್ತು. ಶುಕ್ರವಾರ ಹಬ್ಬದ ಆಚರಣೆ ಸಂದರ್ಭ ಈ ಕುಣಿಯ ಬೆಂಕಿಗೆ ಬಿದ್ದು ಮಡಿವಾಳ ದೇವರಾಜ್ (28) ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾನೆ. ಮೃತನಿಗೆ ತಂದೆ ತಾಯಿ, ಪತ್ನಿ ಇದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

