ಹುಬ್ಬಳ್ಳಿ: ರೈಲ್ವೆ ಟೆಂಡರ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂದು ನಗರದ ವಿಲ್ಸನ್ ತಲಪತಿ ಅವರನ್ನು ನಂಬಿಸಿ, ₹86.06 ಲಕ್ಷ ಪಡೆದು ವಂಚಿಸಿದ ವ್ಯಕ್ತಿಯ ವಿರುದ್ಧ ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ನಿವಾಸಿ ರಮೇಶ ವೈ.ವಿರುದ್ಧ ದೂರು ನೀಡಲಾಗಿದೆ. ರೈಲ್ವೆ ಟೆಂಡರ್ಗಳಲ್ಲಿ ಹೂಡಿಕೆ ಮಾಡಿದರೆ ಶೇ 18ರಿಂದ ಶೇ 28ರವರೆಗೆ ಲಾಭಾಂಶ ನೀಡುವುದಾಗಿ ಹೇಳಿ ಆರೋಪಿಯು, 2024ರಿಂದ ಫೆಬ್ರುವರಿ 2025ರವರೆಗೆ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

