Breaking News

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

ಬೆಂಗಳೂರು: ಜೆಪಿ ನಗರದ ಐಜಿ ಸರ್ಕಲ್‌ನಲ್ಲಿ ರೌಡಿಶೀಟರ್ ರಾಜು ಅಲಿಯಾಸ್ ಹಲ್ಮುರ್ಕ್ ರಾಜಾ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ರಾಜು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಹಳೆಯ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎನ್ನಲಾಗಿದೆ. ರಾಜು ಹಲವು ಕೊಲೆ ಹಾಗೂ ಕೊಲೆ ಯತ್ನ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಸುಮಾರು 10 ವರ್ಷಗಳ ಹಿಂದಿನ ಕೊಲೆ ಪ್ರಕರಣದಲ್ಲೂ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.bಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟ್ ಸಂತೋಷ್ ಎಂಬ ಆರೋಪಿಯನ್ನು ಬಂಧಿಸಿರುವ ಜೆಪಿ ನಗರ ಪೊಲೀಸರು, ಇತರ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *