ಅಂಕೋಲಾದ ಯುವಕ ಕಾರಿನಲ್ಲಿ ನಾಡಬಾಂಬ್ ಸ್ಫೋಟಗೊಂಡು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸರು ನಾಡಬಾಂಬ್ ಹೊಂದಿದ್ದ ಹಾಗೂ ಪೂರೈಸಿದ ಆರೋಪದ ಮೇಲೆ ಮೂವರು ಸ್ಥಳೀಯರನ್ನು ಬಂಧಿಸಿದ್ದಾರೆ. ಆರೋಪಿತರು ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಮೂರು ಸಜೀವ ನಾಡಬಾಂಬ್ಗಳನ್ನು ಪೊಲೀಸರು ಪತ್ತೆಹಚ್ಚಿದ್ದು, ಬಾಂಬ್ ನಿಷ್ಕ್ರಿಯ ದಳ ಅವುಗಳನ್ನು ಸುರಕ್ಷಿತವಾಗಿ ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ನಾಡಬಾಂಬ್ ಬಳಕೆ ಹಾಗೂ ಮೃತನ ಉದ್ದೇಶ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

