ಕೊಪ್ಪಳ ಜಿಲ್ಲೆಯ ಬೋಚನಹಳ್ಳಿ ಗ್ರಾಮದಲ್ಲಿ ಮೊಹರಂ ವೇಳೆ ನಡೆದ ಗಲಾಟೆ ಬಳಿಕ ದಲಿತ ಕುಟುಂಬಗಳ ಮನೆಗಳಿಗೆ ನುಗ್ಗಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ 39 ಜನರ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಕಲಂಗಳಡಿ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಗುಂಪಿನಿಂದಲೂ ಪ್ರತಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

