ಹೈದರಾಬಾದ್: ನಗರದ ಎರಡು ಕಡೆ ನಡೆದ ದಾಳಿಯಲ್ಲಿ ಕಲಬೆರಕೆ ಮಾಂಸ ಹಾಗೂ ರಾಸಾಯನಿಕ ಬಳಸಿ ಸಂಸ್ಕರಿಸಿದ ಕೊಳೆತ ಮೀನು ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹಬೀಬ್ನಗರದಲ್ಲಿ ಮೇಕೆ ಮಾಂಸದ ಹೆಸರಲ್ಲಿ ಎಮ್ಮೆ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನಿಂದ 50 ಕೆಜಿ ಕಲಬೆರಕೆ ಮಾಂಸವನ್ನು ಜಪ್ತಿ ಮಾಡಿ ಪರೀಕ್ಷೆಗೆ ಕಳುಹಿಸಲಾಗಿದೆ. ಮಂಗಳಹಾಟ್ನಲ್ಲಿ ಕೊಳೆತ ಮೀನು ಮತ್ತು ಸೀಗಡಿಗೆ ರಾಸಾಯನಿಕ ಬಳಸಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದು, 262 ಕೆಜಿ ಕೊಳೆತ ಮೀನು-ಸೀಗಡಿ ಸೇರಿದಂತೆ ರಾಸಾಯನಿಕ ಪುಡಿ ಮತ್ತು ಇತರೆ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

