ಮೈಸೂರು: ಕುವೆಂಪುನಗರದ ಹುಡ್ಕೋ ಬಡಾವಣೆಯಲ್ಲಿ ನಡೆದ ನಿತ್ಯಾನಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಸೇರಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಿತ್ಯಾನಂದ ಮದ್ಯಪಾನ ಮಾಡಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಪತ್ನಿ ಸುಶೀಲ, ಸಂಬಂಧಿಕರೊಂದಿಗೆ ಸೇರಿ ಕೊಲೆ ಸಂಚು ರೂಪಿಸಿದ್ದು, ಜೂನ್ 29ರ ಮಧ್ಯರಾತ್ರಿ ಕತ್ತು ಹಿಸುಕಿ ಹತ್ಯೆ ಮಾಡಿದ್ದರು. ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ನಂಬಿಸಲು ಯತ್ನಿಸಿದ್ದರು. ಅಂತ್ಯಸಂಸ್ಕಾರದ ವೇಳೆ ಮೃತನ ಕುತ್ತಿಗೆಯಲ್ಲಿದ್ದ ಗಾಯದ ಗುರುತುಗಳನ್ನು ಸಹೋದರ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ತನಿಖೆ ನಡೆಸಿದ ಕುವೆಂಪುನಗರ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

