Breaking News

ನೆಲಮಂಗಲದಲ್ಲಿ ಬಿಎಲ್‌ಒಗಳ ಕಳ್ಳಾಟ ಬಯಲು: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು ಎಸ್‌ಐಆರ್ ಪತ್ರ ವಿತರಣೆ!

ನೆಲಮಂಗಲ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಿಎಲ್‌ಒಗಳ ಮತ್ತೊಂದು ಕಳ್ಳಾಟ ಬಯಲಾಗಿದೆ. ನಿಯಮದಂತೆ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ ಅಧಿಕಾರಿಗಳು, ನೆಲಮಂಗಲ ನಗರದ ಮಸೀದಿಯೊಂದರಲ್ಲಿ ಕುಳಿತಲ್ಲೇ ಪರಿಷ್ಕರಣೆ ನಡೆಸಿದ್ದಾರೆ. ಮಸೀದಿಗೆ ಸಾರ್ವಜನಿಕರು ಹಾಗೂ ಮಹಿಳೆಯರನ್ನು ಕರೆಸಿಕೊಂಡ ಬಿಎಲ್‌ಒಗಳು, ಅಲ್ಲಿಯೇ ಅವರಿಂದ ಮಾಹಿತಿ ಪಡೆದು ಎಸ್‌ಐಆರ್ ಪತ್ರಗಳನ್ನು ವಿತರಿಸುತ್ತಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ, ಒಂದೇ ಸೂರಿನಡಿ ಜನರನ್ನು ಗುಂಪುಗೂಡಿಸಿ ನಿಯಮ ಉಲ್ಲಂಘಿಸುತ್ತಿರುವ ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *