Breaking News

ಗಾಂಜಾ ಗಿಡ ಬೆಳೆದಿದ್ದವನ ಸೆರೆ

ಕೆ.ಆರ್.ನಗರ: ಮನೆಯ ಪಕ್ಕದಲ್ಲಿಯೇ ಗಾಂಜಾ ಗಿಡಗಳನ್ನು ಬೆಳೆಸಿದ್ದ ತಾಲೂಕಿನ ಹೆಬ್ಬಾಳು ಗ್ರಾಮದ ಮಹದೇವ ಎಂಬಾತನನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿ, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರು ಅಬಕಾರಿ ಜಂಟಿ ಆಯುಕ್ತ, ಮೈಸೂರು ಗ್ರಾಮಾಂತರ ಅಬಕಾರಿ ಉಪ ಆಯುಕ್ತರ ಆದೇಶದಂತೆ ಹುಣಸೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಶುಕ್ರವಾರ ಮಾಹಿತಿದಾರನು ನೀಡಿದ ಖಚಿತ ಮಾಹಿತಿಯ ಮೇರೆಗೆ ಹೆಬ್ಬಾಳು ಗ್ರಾಮದ ಮಹಾದೇವ ಅವರ ಮನೆಗೆ ದಾಳಿ ಮಾಡಲಾಗಿದೆ. ದಾಳಿಯಲ್ಲಿ ಹೆಬ್ಬಾಳು ಗ್ರಾಪಂ ಪಿಡಿಒ ನೇತ್ರಾವತಿ, ಕೆ.ಆರ್.ನಗರ ವಲಯ ಕಚೇರಿಯ ಅಬಕಾರಿ ಉಪನಿರೀಕ್ಷಕ ಎನ್.ದಿನೇಶ, ಮುಖ್ಯಪೇದೆ ಕೆ.ಪಿ.ಶಿವಕುಮಾರ, ಪೇದೆ ಶಿವಪ್ಪ ಭಾನುಸಿ, ಚಾಲಕ ಕೆ.ಮಹದೇವ ಹಾಜರಿದ್ದರು.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *