Breaking News

ಮುಂಬೈನಲ್ಲಿ ಕಟ್ಟಡ ಕುಸಿದು ಐವರು ಮಕ್ಕಳು ಸೇರಿ 6 ಮಂದಿ ದುರ್ಮರಣ

ಮುಂಬೈ: ಭಾರೀ ಮುಂಗಾರು ಮಳೆಯಿಂದ ಮುಂಬೈನಲ್ಲಿ ಭಾನುವಾರ ಸಂಭವಿಸಿದ ವಿವಿಧ ಅವಘಡಗಳಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮನ್‌ಖರ್ದ್ ಪ್ರದೇಶದಲ್ಲಿ ಮನೆ ಕುಸಿದು 6 ಮಂದಿ ಸಾವನ್ನಪ್ಪಿದರೆ, ಮತ್ತೊಂದು ಘಟನೆಯಲ್ಲಿ ಮನೆಯ ಮೇಲೆ ಮರ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ಇದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಧಾರಾಕಾರ ಮಳೆಯಿಂದ ವಿಮಾನ ಮತ್ತು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ನಗರದ ಹಲವು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಕೇರಳ, ದೆಹಲಿ, ಪಶ್ಚಿಮ ಬಂಗಾಳ ಹಾಗೂ ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲೂ ಭಾರೀ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಒಡಿಶಾ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಇನ್ನಷ್ಟು ಮಳೆಯ ಮುನ್ಸೂಚನೆ ನೀಡಲಾಗಿದೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *