ದಾವಣಗೆರೆ ಜಿಲ್ಲೆಯ ಬಸವಪಟ್ಟಣ ಪೊಲೀಸ್ ಠಾಣೆ ಆವರಣದಲ್ಲೇ ಪ್ರೀತಿಸಿ ಮದುವೆಯಾದ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ದಾಳಿಯಲ್ಲಿ ಕಂಚುಗಾರನಹಳ್ಳಿ ನಿವಾಸಿ 22 ವರ್ಷದ ಸಿದ್ದೇಶ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದೇಶ್ ಹಾಗೂ ದಾಗಿನಕಟ್ಟಿ ಗ್ರಾಮದ ಲೀಲಾವತಿ ಇತ್ತೀಚೆಗೆ ಪ್ರೀತಿಸಿ ಮದುವೆಯಾಗಿದ್ದರು. ಜೀವ ಬೆದರಿಕೆ ಹಿನ್ನೆಲೆಯಲ್ಲಿ ಎಸ್ಪಿ ಕಚೇರಿಗೆ ದೂರು ನೀಡಿದ್ದ ನವಜೋಡಿ, ಪೊಲೀಸರ ಸೂಚನೆಯಂತೆ ಬಸವಪಟ್ಟಣ ಠಾಣೆಗೆ ಬಂದಿದ್ದರು. ಈ ವೇಳೆ ಹುಡುಗಿಯ ಸಂಬಂಧಿಕರಾದ ನಾಗರಾಜ ಹಾಗೂ ಇತರರು ಠಾಣೆ ಆವರಣದಲ್ಲೇ ಸಿದ್ದೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

