Breaking News

ಅಮಾನವೀಯ ಘಟನೆ; ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಳಕಿ ಗ್ರಾಮದ ತೆಂಕೋಲ್ ಬಸ್ ನಿಲ್ದಾಣದಲ್ಲಿ ಚೀಲದಲ್ಲಿ ಕಟ್ಟಿ ಬಿಟ್ಟು ಹೋಗಿದ್ದ ನವಜಾತ ಹೆಣ್ಣು ಮಗುವನ್ನು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ರಕ್ಷಿಸಿದ್ದಾರೆ. ಭಾನುವಾರ ರಾತ್ರಿ ಮಗುವಿನ ಅಳುವಿನ ಶಬ್ದ ಕೇಳಿದ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ತಂಡ ಮಗುವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದೆ. ವೈದ್ಯರ ಪರೀಕ್ಷೆಯಲ್ಲಿ ಮಗು ಆರೋಗ್ಯವಾಗಿದ್ದು, ಹೆಚ್ಚಿನ ಆರೈಕೆಗೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವನ್ನು ಬಿಟ್ಟು ಹೋದವರು ಯಾರು ಮತ್ತು ಕೃತ್ಯದ ಹಿಂದಿನ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *