Breaking News

ಮದುವೆ ನೆಪದಲ್ಲಿ ಗರ್ಭಿಣಿಯಾಗಿಸಿ ವಂಚನೆ: ದೂರು ದಾಖಲಾಗುತ್ತಿದ್ದಂತೆ ಪರಾರಿ

ಶಿವಮೊಗ್ಗ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಶಿವಮೊಗ್ಗದ ಶ್ರೀನಿಧಿ ಎಂಬಾತನ ವಿರುದ್ಧ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊರ ರಾಜ್ಯದ ಯುವತಿಯನ್ನು ಗರ್ಭಿಣಿ ಮಾಡಿ ಶ್ರೀನಿಧಿ ಎಂಬಾತ ಕೈಕೊಟ್ಟಿದ್ದಾನೆ. ಪ್ರೀತಿ ಪ್ರೇಮದ ಹೆಸರಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗದ ದುರ್ಗಿಗುಡಿಯ ಅನುರಾಧ ಕ್ರಿಯೇಶನ್ಸ್ ನಲ್ಲಿ ನಡೆದಿದೆ. ಯುವತಿ ಗರ್ಭಿಣಿಯಾಗಿರುವ ವಿಚಾರ ತಿಳಿದು ಮದುವೆಗೆ ನಿರಾಕರಿಸಿದ್ದಾನೆ. ಶಿವಮೊಗ್ಗದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ. ದುರ್ಗಿಗುಡಿ ಪ್ರದೇಶದ ಟೈಲರ್ ಶ್ರೀನಿಧಿ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಅನುರಾಧ ಕ್ರಿಯೇಶನ್ಸ್ ನಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಶ್ರೀನಿಧಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *