Breaking News

ಉಡುಪಿ ನಗರಸಭೆ ಸಿಬ್ಬಂದಿಗೆ 10 ಲಕ್ಷ ರೂ. ನೀಡುವಂತೆ ಬೆದರಿಕೆ: ಮಹಿಳೆ ಸಹಿತ ಮೂವರು ಆರೋಪಿಗಳ ಬಂಧನ

ಉಡುಪಿ ನಗರಸಭೆಯ ಪೌರ ಕಾರ್ಮಿಕರ ಪ್ರಭಾರ ಮೇಲ್ವಿಚಾರಕರೊಬ್ಬರಿಗೆ ₹10 ಲಕ್ಷ ನೀಡುವಂತೆ ಬೇಡಿಕೆ ಇಟ್ಟು, ಇಲ್ಲದಿದ್ದರೆ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಯೋಗೀಶ್ ಪ್ರಭು, ವಿನಯ ಕುಮಾರ್ ಹಾಗೂ ಸ್ಮಿತಾ ಬಿ. ಬಂಗೇರ ಬಂಧಿತರು. ಆರೋಪಿಗಳು ಕೆಲಸದಲ್ಲಿ ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿ, ಬಳಿಕ ₹10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಮೇಲ್ವಿಚಾರಕರು ₹2 ಲಕ್ಷ ನೀಡಿದ್ದು, ಉಳಿದ ₹8 ಲಕ್ಷ ನೀಡುವಂತೆ ನಿರಂತರವಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಹಣ ನೀಡಲು ನಿರಾಕರಿಸಿದ ಬಳಿಕ ಮಹಿಳೆಯ ಹೆಸರಿನಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಲಾಗಿತ್ತು. ನಂತರವೂ ಉಳಿದ ಹಣಕ್ಕಾಗಿ ಬೆದರಿಕೆ ಮುಂದುವರಿದ ಹಿನ್ನೆಲೆಯಲ್ಲಿ ಸಂತ್ರಸ್ತರು ದೂರು ನೀಡಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *