Breaking News

ಬೆಂಗಳೂರು: ಡಿಸಿಪಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ವಜ್ರಹನುಮಾನ ನಗರದ ನಿವಾಸಿಗಳು, ವಸತಿ ನಿರ್ಮಾಣಕ್ಕೆ ಪಡೆದ ಪರವಾನಗಿಯನ್ನು ದುರುಪಯೋಗಪಡಿಸಿಕೊಂಡು ಮಸೀದಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಸಿಟಿ ಸರ್ವೆ ನಂ. 1878/K/158ರ ಪ್ಲಾಟ್‌ನಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು ಧಾರ್ಮಿಕ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ. ಮನವಿಯಲ್ಲಿ, ಈ ವಿಷಯವಾಗಿ ಪ್ರಶ್ನಿಸಿದಾಗ ಸಂಬಂಧಪಟ್ಟವರು ಸಮರ್ಪಕ ಉತ್ತರ ನೀಡಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೆ, ಈ ಬೆಳವಣಿಗೆಯಿಂದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಉಂಟಾಗಿದ್ದು, ಕಟ್ಟಡ ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸಿ, ಪರವಾನಗಿ ನಿಯಮ ಉಲ್ಲಂಘನೆಯಾಗಿದೆಯೇ ಎಂಬುದನ್ನು ಪರಿಶೀಲಿಸುವಂತೆ ಪುರಸಭೆಗೆ ಒತ್ತಾಯಿಸಲಾಗಿದೆ.
ನಿವಾಸಿಗಳು, ವಸತಿ ಉದ್ದೇಶಕ್ಕಾಗಿ ಮಂಜೂರಾದ ಪ್ಲಾಟ್‌ನಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದು, ಭವಿಷ್ಯದಲ್ಲಿ ಯಾವುದೇ ಕೋಮು ಸೌಹಾರ್ದಕ್ಕೆ ಧಕ್ಕೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *