ಬೆಂಗಳೂರು ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಸೆಕ್ರೆಟರಿ, ಪ್ರಿನ್ಸಿಪಾಲ್ ಹಾಗೂ ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿದ್ಯಾರ್ಥಿಯ ತಂದೆ ಮಹೇಶ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರಿನ ಪ್ರಕಾರ, ಶಾಲಾ ಸಿಬ್ಬಂದಿ ವಿದ್ಯಾರ್ಥಿಯ ಮೇಲೆ ದೈಹಿಕ ಹಲ್ಲೆ ನಡೆಸಿ ಮಾನಸಿಕ ಕಿರುಕುಳ ನೀಡಿದ್ದು, ಇದರಿಂದ ಮನನೊಂದ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಜ್ಞಾನಭಾರತಿ ಪೊಲೀಸರು ಹೊಸ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಸೆಕ್ಷನ್ಗಳು ಹಾಗೂ ಬಾಲಾಪರಾಧಿ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

