Breaking News

ಅಕ್ರಮ ನಾಡ ಬಂದೂಕು ಸಾಗಣೆ: ನಾಲ್ವರು ಪೊಲೀಸರ ವಶಕ್ಕೆ!

ಗುಂಡ್ಲುಪೇಟೆ: ಅಕ್ರಮವಾಗಿ ನಾಡ ಬಂದೂಕುಗಳನ್ನು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ, 3 ಬಂದೂಕು, 18 ಕಾರ್ಟ್ರಿಜ್‌ ಗುಂಡುಗಳು, ಎರಡು ಚಾಕುಗಳು ಹಾಗೂ ಒಂದು ಕಾರನ್ನು ತೆರಕಣಾಂಬಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಜು.17ರ ಶುಕ್ರವಾರ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಗೂರು ಗ್ರಾಮದ ಕುಮಾರಪ್ಪ, ಸುನೀಲ್, ದಿನೇಶ್ ಮತ್ತು ಕಾಂತ ಬಂಧಿತ ಆರೋಪಿಗಳು. ಇವರು ಕಾಡು ಪ್ರಾಣಿಗಳ ಬೇಟೆಗೆ ಅಕ್ರಮವಾಗಿ ನಾಡ ಬಂದೂಕುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ತೆರಕಣಾಂಬಿ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕ ಜವರೇಗೌಡ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಪೊಲೀಸ್ ಠಾಣೆ ಮುಂದೆ ಮಾರುತಿ ಓಮ್ನಿ ಕಾರು ತಡೆದು ಪರಿಶೀಲನೆ ನಡೆಸಿದ ವೇಳೆ ವಾಹನದಲ್ಲಿ 2 ಒಂಟಿ ನಳಿಕೆಯ ಬಂದೂಕುಗಳು, 1 ನಾಡ ಬಂದೂಕು, ಪ್ಲಾಸ್ಟಿಕ್ ಕವರ್‌ನಲ್ಲಿದ್ದ 18 ಕಾರ್ಟ್ರಿಜ್‌ ಗುಂಡುಗಳು ಹಾಗೂ 2 ಕಬ್ಬಿಣದ ಚಾಕುಗಳು ಪತ್ತೆಯಾಗಿವೆ. ತಕ್ಷಣ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.ಈ ಸಂಬಂಧ ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *