Breaking News

ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ

ಮೂಡುಬಿದಿರೆ: ಬಸ್ ನಿಲ್ದಾಣದ ಮೊಬೈಲ್ ಅಂಗಡಿಗೆ ಶನಿವಾರ ಮಧ್ಯಾಹ್ನ ತಲವಾರು ಹಿಡಿದು ನುಗ್ಗಿದ ಯುವಕ ಗಲಾಟೆ ನಡೆಸಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿದ್ದಾನೆ. ಗ್ರಾಹಕರು ಅಂಗಡಿಯಲ್ಲಿದ್ದ ವೇಳೆ ತಲವಾರು ಝಳಪಿಸಿದ ಯುವಕನನ್ನು ಸ್ಥಳೀಯ ಯುವಕರು ಸಮಯಪ್ರಜ್ಞೆಯಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರಂಭದಲ್ಲಿ ಪೆರಿಂಜೆಯವನು ಎಂದು ಹೇಳಿದ್ದ ಆತ, ಬಳಿಕ ಕೋಟೆಬಾಗಿಲಿನ ಸಂದೇಶ್ ಎಂಬಾತ ತಲವಾರು ನೀಡಿದ್ದಾನೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ. ತಲವಾರು ಹಿಡಿದು ಅಂಗಡಿಗೆ ನುಗ್ಗಿ ಗಲಾಟೆ ನಡೆಸಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಕುರಿತು ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Share News

About BigTv News

Check Also

ಆಕಸ್ಮಿಕ ಬೆಂಕಿ: ಸ್ಕಾರ್ಪಿಯೋ ಕಾರು ಸುಟ್ಟು ಭಸ್ಮ

ವಿಜಯಪುರ: ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಜು.18) …

Leave a Reply

Your email address will not be published. Required fields are marked *