Breaking News

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದ್ಮನಾಭನಗರದ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಬಳಿಕ ತೀವ್ರ ದುಃಖದಲ್ಲಿದ್ದ ದೇವೇಗೌಡರ ಪಕ್ಕದಲ್ಲೇ ಕುಳಿತು ಅವರ ಕೈ ಹಿಡಿದು ಆತ್ಮೀಯವಾಗಿ ಸಾಂತ್ವನ ಹೇಳಿದರು. ರಾಜಕೀಯವನ್ನು ಬದಿಗಿಟ್ಟು ಹಿರಿಯ ನಾಯಕನಿಗೆ ಧೈರ್ಯ ತುಂಬಿದ ಈ ಭಾವುಕ ಕ್ಷಣ ಅಲ್ಲಿದ್ದವರ ಮನಸ್ಸನ್ನು ಮಿಡಿಯುವಂತೆ ಮಾಡಿತು. ಇದೇ ವೇಳೆ ಎಚ್.ಡಿ. ಕುಮಾರಸ್ವಾಮಿ ಹಾಗೂ ಎಚ್.ಡಿ. ರೇವಣ್ಣ ಅವರಿಗೂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು ‘ಎಕ್ಸ್’ನಲ್ಲಿ ಸಂತಾಪ ಸೂಚಿಸಿ, ಚೆನ್ನಮ್ಮ ಅವರನ್ನು ಸರಳತೆ ಮತ್ತು ಧೈರ್ಯದ ಪ್ರತಿರೂಪ ಎಂದು ಸ್ಮರಿಸಿದ್ದರು. ದೇವೇಗೌಡರ ಕುಟುಂಬದೊಂದಿಗೆ ತಮ್ಮ ಹಳೆಯ ಒಡನಾಟವನ್ನು ನೆನಪಿಸಿಕೊಂಡ ಅವರು, ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದರು.

Share News

About BigTv News

Check Also

ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ

ಮೂಡುಬಿದಿರೆ: ಬಸ್ ನಿಲ್ದಾಣದ ಮೊಬೈಲ್ ಅಂಗಡಿಗೆ ಶನಿವಾರ ಮಧ್ಯಾಹ್ನ ತಲವಾರು ಹಿಡಿದು ನುಗ್ಗಿದ ಯುವಕ ಗಲಾಟೆ ನಡೆಸಿ ಕೆಲಕಾಲ ಆತಂಕದ …

Leave a Reply

Your email address will not be published. Required fields are marked *