ಬೆಂಗಳೂರಿನ ಶಿವಾಜಿನಗರದಲ್ಲಿ ಫುಟ್ಪಾತ್ ಮೇಲಿನ ಅಕ್ರಮ ಒತ್ತುವರಿ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ಸೇರಿದಂತೆ ಆರೋಪಿಗಳು ಕಾರ್ಯಾಚರಣೆಗೆ ಅಡ್ಡಿಪಡಿಸಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ, ಬಳಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಬಸವರಾಜ ಪಡುಕೋಟೆ ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

