Breaking News

ಬಂಧನ ಭೀತಿ- ಮೊಬೈಲ್‌ ಸ್ವಿಚ್ಡ್ ಆಫ್ ಮಾಡಿ ಓಡಿಹೋದ ನೂರಕ್ಕೂ ಹೆಚ್ಚು ಅಧಿಕಾರಿಗಳು; ಸಾಮೂಹಿಕ ರಜೆ!

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಅಕ್ರಮ ಭೂ ಮಂಜೂರಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ ಇಲಾಖೆಯ 100ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಪಡೆದಿದ್ದಾರೆ. ಕೆಲವರು ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಕಚೇರಿಗೂ ಗೈರಾಗಿದ್ದಾರೆ ಎನ್ನಲಾಗಿದೆ. ಹೇಮಾವತಿ, ಯಗಚಿ ಹಾಗೂ ವಾಟೆಹೊಳೆ ಜಲಾಶಯ ಯೋಜನೆಗಳ ಸಂತ್ರಸ್ತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ ಆರೋಪದ ತನಿಖೆ ನಡೆಯುತ್ತಿದೆ. ಇತ್ತೀಚೆಗೆ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ ಹಲವು ಮಂದಿಯ ಬಂಧನದ ಬಳಿಕ ಅಧಿಕಾರಿಗಳಲ್ಲಿ ಆತಂಕ ಹೆಚ್ಚಾಗಿದೆ. 2015ರಿಂದ 2019ರ ಅವಧಿಯಲ್ಲಿ ಸಕಲೇಶಪುರ ಸೇರಿದಂತೆ ಹಲವು ತಾಲೂಕುಗಳಲ್ಲಿ ಕಾರ್ಯನಿರ್ವಹಿಸಿದ್ದ ತಹಶೀಲ್ದಾರರು, ಉಪ ತಹಶೀಲ್ದಾರರು ಸೇರಿದಂತೆ 150ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ತನಿಖಾ ವರದಿಯಲ್ಲಿ ಉಲ್ಲೇಖವಾಗಿದ್ದು, ಮುಂದಿನ ಕಾನೂನು ಕ್ರಮದ ನಿರೀಕ್ಷೆಯಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *