ಮಂಡ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗುಳಗಟ್ಟ ಗ್ರಾಮದಲ್ಲಿ ನಡೆದಿದೆ. ಗುಳಗಟ್ಟ ಗ್ರಾಮದ ನಿವಾಸಿ ರುದ್ರೇಗೌಡ(57) ಕೊಲೆಯಾದವರು ಎಂದು ಹೇಳಲಾಗಿದೆ. ಕಳೆದ ರಾತ್ರಿ ಅವರನ್ನು ಕೊಲೆ ಮಾಡಲಾಗಿದೆ.ಕೊಲೆ ಮಾಡಿದ ನಂತರ ಮೃತದೇಹದ ಮೇಲೆ ಸ್ಕೂಟಿ ಎಸೆದಿದ್ದಾರೆ. ಟ್ರಾನ್ಸ್ಫಾರ್ಮರ್ ನಿಂದ ವಿದ್ಯುತ್ ತೆಗೆದುಕೊಳ್ಳುವ ವಿಚಾರಕ್ಕೆ ಗಲಾಟೆಯಾಗಿತ್ತು ಎನ್ನಲಾಗಿದೆ. ಪಕ್ಕದ ಜಮೀನಿನ ಮಾಲೀಕನ ಜೊತೆಗೆ ಗಲಾಟೆ ನಡೆದಿದ್ದು, ಇದೇ ವಿಚಾರಕ್ಕೆ ರುದ್ರೇಗೌಡ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

