ಶಿವಮೊಗ್ಗದಲ್ಲಿ ತಾನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡು ರಿಕ್ರಿಯೇಷನ್ ಕ್ಲಬ್ ಪರವಾನಗಿ ಕೊಡಿಸುವುದಾಗಿ ನಂಬಿಸಿ ರೈತನಿಂದ ₹15 ಲಕ್ಷ ಪಡೆದು ವಂಚನೆ ಮಾಡಿದ ಆರೋಪಿಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ಎಂದು ಗುರುತಿಸಲಾಗಿದೆ. ರೈತ ಮಂಜುನಾಥ ಹಂಜಿ ಅವರಿಂದ ಫೋನ್ಪೇ ಹಾಗೂ ನಗದು ರೂಪದಲ್ಲಿ ಹಂತ ಹಂತವಾಗಿ ₹15 ಲಕ್ಷ ಪಡೆದು, ಪರವಾನಗಿ ನೀಡದೇ ಹಣದೊಂದಿಗೆ ತಲೆಮರೆಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದೇ ರೀತಿಯಲ್ಲಿ ಇತರರಿಗೂ ವಂಚನೆ ನಡೆಸಿದ್ದಾನೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

