ಬೆಂಗಳೂರು ವರ್ತೂರು ಠಾಣೆ ಪೊಲೀಸರು ತಂಪು ಪಾನೀಯ ಹಾಗೂ ನೀರಿನ ಕ್ಯಾನ್ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ ₹50 ಸಾವಿರ ದರೋಡೆ ಮಾಡಿದ್ದ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 8 ಮೊಬೈಲ್ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 25ರಂದು ಕೊಡತಿಯಿಂದ ರಾಯಸಂದ್ರ ಬಳಿ ಡೆಲಿವರಿ ವಾಹನವನ್ನು ತಡೆದು ಚಾಲಕನಿಗೆ ಬೆದರಿಕೆ ಹಾಕಿ ಹಣ ದೋಚಿ ಆರೋಪಿಗಳು ಪರಾರಿಯಾಗಿದ್ದರು. ಡೆಲಿವರಿ ಬಾಯ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೋಜು ಮಾಡಲು ಹಣಕ್ಕಾಗಿ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಬಾಲಕನನ್ನು ಸಹ ವಶಕ್ಕೆ ಪಡೆದು ಮುಂದಿನ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

