ದಾವಣಗೆರೆ: ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ವಿಚಾರವಾಗಿ ದಲಿತ ಯುವಕರ ಮೇಲೆ ಹಲ್ಲೆ ನಡೆದ ಆರೋಪ ಕೇಳಿಬಂದಿದ್ದು, ಈ ಸಂಬಂಧ 42 ಜನರ ವಿರುದ್ಧ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಘಟನೆ ಬಳಿಕ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಎಸ್ಪಿ ಶೇಖರ್ ಹೆಚ್.ಟಿ ಗ್ರಾಮಕ್ಕೆ ಭೇಟಿ ನೀಡಿ ಶಾಂತಿ ಸಭೆ ನಡೆಸಿದರು. ಅವರ ಸಮ್ಮುಖದಲ್ಲೇ ದಲಿತ ಸಮುದಾಯದ ಮಹಿಳೆಯರು ಮತ್ತು ಯುವಕರು ದೇವಸ್ಥಾನ ಪ್ರವೇಶಿಸಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದು, ಗ್ರಾಮದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

