Breaking News

ವಸತಿ ಶಾಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ: 19 ವಿದ್ಯಾರ್ಥಿಗಳಿಂದ ಪೆನ್ನಿನಿಂದ ಚುಚ್ಚಿ, ತಣ್ಣೀರು ಎರಚಿ ಸಹಪಾಠಿ ಮೇಲೆ ಹಲ್ಲೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬನ ಮೇಲೆ ಅದೇ ತರಗತಿಯ 19 ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗೆ ಪೆನ್‌ನಿಂದ ಚುಚ್ಚಿ ಗಾಯಗೊಳಿಸಿ, ವಿವಿಧ ರೀತಿಯಲ್ಲಿ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ. ಜ್ವರದಿಂದ ಮನೆಗೆ ಕರೆದುಕೊಂಡು ಹೋದಾಗ ವಿದ್ಯಾರ್ಥಿಯ ದೇಹದ ಮೇಲಿನ ಗಾಯಗಳು ಪೋಷಕರ ಗಮನಕ್ಕೆ ಬಂದಿದ್ದು, ಘಟನೆ ಬೆಳಕಿಗೆ ಬಂದಿದೆ. ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿತ್ತು ಎಂದು ಆರೋಪಿಸಲಾಗಿದೆ. ಘಟನೆ ಕುರಿತು ಪೋಷಕರು ಹಾಸ್ಟೆಲ್ ವಾರ್ಡನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಗಾಯಾಳು ವಿದ್ಯಾರ್ಥಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *