ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಹಣ ಕಟ್ಟಿ ಇಸ್ಪೀಟ ಆಡುತ್ತಿದ್ದವರ ಮೇಲೆ ಬೆಳಗಾವಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ 15 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ವಾಘವಾಡೆ ಗ್ರಾಮದ ಮಾರ್ಖಂಡೆಯ ನಗರದಲ್ಲಿ ನಡೆದ ದಾಳಿಯಲ್ಲಿ ಆರೋಪಿಗಳಿಂದ ₹69,150 ನಗದು ಹಾಗೂ ಇಸ್ಪೀಟ ಎಲೆಗಳನ್ನು ಜಪ್ತಿ ಮಾಡಲಾಗಿದೆ. ಪಿಎಸ್ಐ ಸಂತೋಷ ದಳವಾಯಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿಗಳ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 87 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ದಾಳಿ ನಡೆಸಿದ ಪೊಲೀಸ್ ತಂಡದ ಕಾರ್ಯವನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

