ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನದ ಹೊಗೆ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಹಲವು ನಾಯಕರ ಬೆಂಬಲಿಗರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದು, ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಅವರ ಬೆಂಬಲಿಗರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ವೇಳೆ ಬೆಂಬಲಿಗನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆ ಸಚಿವ ಸ್ಥಾನ ಹಂಚಿಕೆ ಕುರಿತ ಅಸಮಾಧಾನ ಎಷ್ಟರ ಮಟ್ಟಿಗೆ ತೀವ್ರವಾಗಿದೆ ಎಂಬುದನ್ನು ತೋರಿಸಿದೆ.
ಇನ್ನೊಂದೆಡೆ, ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ ಸಚಿವ ಸ್ಥಾನ ಸಿಗದಿದ್ದಕ್ಕೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಪಕ್ಷದೊಳಗಿನ ಅಸಮಾಧಾನಕ್ಕೆ ಮತ್ತಷ್ಟು ಇಂಬು ನೀಡಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

