ಉಡುಪಿ: ಹಾರ್ದಳ್ಳಿ ಮಂಡಳ್ಳಿ ಗ್ರಾ.ಪಂ. ವ್ಯಾಪ್ತಿಯ ಸಮೃದ್ಧ ಸಂಜೀವಿನಿ ಒಕ್ಕೂಟದಲ್ಲಿ ಮುಖ್ಯ ಬರಹಗಾರ್ತಿಯಾಗಿರುವ ಅಶ್ವಿನಿ (33) ವಿರುದ್ಧ ₹33.50 ಲಕ್ಷ ಹಣ ದುರುಪಯೋಗ ಹಾಗೂ ನಕಲಿ ಸಹಿ-ಸೀಲು ಬಳಸಿ ವಂಚನೆ ನಡೆಸಿದ ಆರೋಪ ಕೇಳಿಬಂದಿದೆ. ಸರ್ಕಾರದಿಂದ ಬಂದ ಅನುದಾನವನ್ನು ಸ್ವಸಹಾಯ ಸಂಘಗಳಿಗೆ ಹಂಚಿಕೆ ಮಾಡದೇ, ನಕಲಿ ದಾಖಲೆಗಳ ಮೂಲಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಕ್ಕೂಟದ ಅಧ್ಯಕ್ಷರಿಗೆ ಬ್ಯಾಂಕ್ ವ್ಯವಹಾರಗಳ ಮೊಬೈಲ್ ಸಂದೇಶ ಬರದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

