ಚಿಕ್ಕೋಡಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿ ಹೊಲದಲ್ಲಿ ಮುಚ್ಚಿಟ್ಟಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು 6 ತಿಂಗಳ ಬಳಿಕ ಖಡಕಲಾಟ ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಬಂಗಾರಿ ಗಾವಡೆ ಹಾಗೂ ರಾಮಾ ರಾಣಗೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಗಾರಿ ಹಾಗೂ ರಾಮಾ ರಾಣಗೆ ನಡುವೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಇದಕ್ಕೆ ಪತಿ ರಾಘು ಅಡ್ಡಿಯಾಗಿದ್ದರಿಂದ ಇಬ್ಬರೂ ಸೇರಿ ಕೊಲೆ ಸಂಚು ರೂಪಿಸಿದ್ದರು. ರಾಘುವನ್ನು ಹೊಲಕ್ಕೆ ಕರೆಸಿಕೊಂಡು ಹತ್ಯೆ ಮಾಡಿ, ಶವವನ್ನು ಮುಚ್ಚಿಟ್ಟಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕೊಲೆ ಬಳಿಕ ಪತಿ ಕುರಿ ಕಾಯಲು ಬೇರೆ ಜಿಲ್ಲೆಗೆ ತೆರಳಿದ್ದಾನೆ ಎಂದು ಬಂಗಾರಿ ಕುಟುಂಬಸ್ಥರನ್ನು ನಂಬಿಸಿದ್ದಳು. ಸಹೋದರ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು 6 ತಿಂಗಳ ಬಳಿಕ ಪ್ರಕರಣದ ಸತ್ಯ ಬಯಲಿಗೆಳೆದಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
