ಬಿಡದಿ (ರಾಮನಗರ): ಇಲ್ಲಿನ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅವರೆಗೆರೆ ಸೇತುವೆ ಬಳಿ ಬೆಳಿಗ್ಗೆ ಕೇರಳದ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಹಲವರಿಗೆ ಗಾಯವಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದಿಂದ ರಾತ್ರಿ ಹೊರಟಿದ್ದ ಬಸ್ ಬೆಂಗಳೂರಿಗೆ ಬರುತ್ತಿತ್ತು. ಅತಿ ವೇಗವಾಗಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕ ನಿದ್ರೆ ಮಂಪರಿನಲ್ಲಿ ರಸ್ತೆ ವಿಭಜಕಕ್ಕೆ ಗುದ್ದಿದಾಗ ಬಸ್ ಪಲ್ಟಿಯಾಗಿದೆ. ಶವಗಳನ್ನು ಚಲ್ಲಘಟ್ಟದಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
