Breaking News

ಬಿಡದಿ: ಹೆದ್ದಾರಿಯಲ್ಲಿ ಬಸ್ ಪಲ್ಟಿ; ಇಬ್ಬರ ಸಾವು

ಬಿಡದಿ (ರಾಮನಗರ): ಇಲ್ಲಿನ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅವರೆಗೆರೆ ಸೇತುವೆ ಬಳಿ ಬೆಳಿಗ್ಗೆ ಕೇರಳದ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಹಲವರಿಗೆ ಗಾಯವಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದಿಂದ ರಾತ್ರಿ ಹೊರಟಿದ್ದ ಬಸ್ ಬೆಂಗಳೂರಿಗೆ ಬರುತ್ತಿತ್ತು. ಅತಿ ವೇಗವಾಗಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕ ನಿದ್ರೆ ಮಂಪರಿನಲ್ಲಿ ರಸ್ತೆ ವಿಭಜಕಕ್ಕೆ ಗುದ್ದಿದಾಗ ಬಸ್ ಪಲ್ಟಿಯಾಗಿದೆ. ಶವಗಳನ್ನು ಚಲ್ಲಘಟ್ಟದಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ, ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ ಪತ್ನಿ

ಚಿಕ್ಕೋಡಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿ ಹೊಲದಲ್ಲಿ ಮುಚ್ಚಿಟ್ಟಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು …

Leave a Reply

Your email address will not be published. Required fields are marked *