ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಬೆಂಗಳೂರಿನ ವಿವೇಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಪತಿಯೊಬ್ಬ ಕಸದ ತೊಟ್ಟಿಗೆ ಎಸೆದಿದ್ದಾನೆ. ಕುಡಿದು ಬಂದು ಪತ್ನಿ ಗೀತಾ (48) ಜೊತೆಗೆ ಪತಿ ಆಂಟೋನಿ ಜಗಳ ತೆಗೆದಿದ್ದಾನೆ. ಬಳಿಕ ಗಲಾಟೆ ವೇಳೆ ಪತ್ನಿಯನ್ನು ಕೊಲೆ ಮಾಡಿದ್ದಾನೆ. ನಂತರ ಶವವನ್ನು ಕಸದ ತೊಟ್ಟಿಗೆ ಎಸೆದಿದ್ದ. ಮೃತ ಪತ್ನಿಯ ದೇಹದ ಮೇಲೆ ಗಾಯದ ಕಲೆಗಳು ಪತ್ತೆಯಾಗಿದ್ದು, ಪೊಲೀಸರು ಇದೀಗ ಪತಿ ಅಂಟೋನಿಯನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

